Saturday, January 4, 2020

ಕೋಲಾರದಲ್ಲಿ ಪೌರತ್ವ ಕಾಯ್ದೆ ಬೆಂಬಲಿಸಿ ಪ್ರತಿಭಟನೆ.....ಲಘು ಲಾಠಿ ಪ್ರಹಾರ.


ಪೌರತ್ವ ಕಾಯ್ದೆ ಪರವಾಗಿ ನಡೆದ ಹೋರಾಟದಲ್ಲಿ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮೀರಿ ಹೋಗಲು ಪ್ರಯತ್ನಿಸಿದಾಗ ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಇಂದು ಕೋಲಾರದಲ್ಲಿ ನಡೆದಿದೆ. ಜನಜಾಗೃತಿ ರ‍್ಯಾಲಿ ಟವರ್ ಕ್ಲಾಕ್ ಸರ್ಕಲ್ ಕಡೆ ಹೋಗದಂತೆ ಸುರಕ್ಷತೆಯ ದೃಷ್ಟಿಯಿಂದ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಅದನ್ನೂ ಮೀರಿ ಕಾರ್ಯಕರ್ತರು ಟವರ್ ಕ್ಲಾಕ್ ದಾಟಿ ಹೋಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆಯಲು ಹೋದಾಗ ಪೊಲೀಸರ ಮಾತು ಕೇಳದೆ ಮುನ್ನುಗ್ಗಿದಾಗ ಅವರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಲಾಠಿ ಪ್ರಹರದಿಂದ ರೊಚ್ಚಿಗ್ಗೆದ್ದ ಬಿಜೆಪಿ ಕಾರ್ಯಕರ್ತರು ಪೊಲೀಸರ ಈ ನಡೆಗೆ ಆಕ್ರೋಶಗೊಂಡು ಲಾಠಿಚಾರ್ಜ್ ಮಾಡಿದ ಪೊಲೀಸರ ಅಮಾನತಿಗೆ ಆಗ್ರಹಿಸಿದ ನೂರಾರು ಕಾರ್ಯಕರ್ತರು ಧರಣಿ ನಡೆಸಿದರು. ಬಿಜೆಪಿ ಸಂಸದ ಎಸ್. ಮುನಿಸ್ವಾಮಿ, ವೈ.ಎ. ನಾರಾಯಣಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು.

0 Comments:

Post a Comment

Subscribe to Post Comments [Atom]

<< Home