Monday, January 20, 2020

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ....... ಆತಂಕದಲ್ಲಿ ಮಂಗಳೂರಿಗರು ರಾಜ್ಯಾದ್ಯಂತ ಹೈ ಅಲರ್ಟ್


ಇಂದು ಬೆಳಗ್ಗೆ ಆಟೋ ಮುಖಾಂತರ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಉಗ್ರಗಾಮಿಯೊಬ್ಬ ಒಂದು ಸಜೀವ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ಬಿಟ್ಟು ಹೋಗಿದ್ದು, ಹೀಗಾಗಿ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತದನಂತರ ಸಾರ್ವಜನಿಕರು ಆ ಬ್ಯಾಗ್ ನಲ್ಲಿ ಬಾಂಬ್ ಇರಬಹುದೆಂದು ಊಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಮಂಗಳೂರು ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಆ ಅನುಮಾನಾಸ್ಪದ ಬ್ಯಾಗ್ ನಲ್ಲಿ ಬಾಂಬ್ ಇರುವದನ್ನು ಖಚಿತ ಪಡಿಸಿಕೊಂಡ ಅಧಿಕಾರಿಗಳು ತಕ್ಷಣವೇ ಬಾಂಬ್ ನಿಷ್ಕ್ರಿಯಗೊಳಿಸುವ ವಾಹನ ತರಿಸಿಕೊಂಡು ಆ ಬ್ಯಾಗ್ ಅನ್ನು ಬಾಂಬ್ ನಿಷ್ಕ್ರಿಯಗೊಳಿಸುವ ವಾಹನದೊಳಗೆ ಇಡಲಾಯಿತು ನಂತರ ಬೆಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿಯೊಂದಿಗೆ ಅದನ್ನು ಮಂಗಳೂರಿನ ಹೊರವಲಯದ ಕೆಂಜಾರು ಮೈದಾನದಲ್ಲಿ ಐಇಡಿ  ಬಾಂಬ್ ಅನ್ನು ನಿಷ್ಕ್ರಿಯ ಗೊಳಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭಗೊಡಿದೆ.ನಗರದ ಪೊಲೀಸ್ ಆಯುಕ್ತ ಡಾ. ಹರ್ಷ ಸೇರಿದಂತೆ ಹಲವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.


0 Comments:

Post a Comment

Subscribe to Post Comments [Atom]

<< Home