Thursday, March 5, 2020

ಕರ್ತವ್ಯಲೋಪ ಡಿಹೆಚ್ಓ ಅಮಾನತು.

ಚಿಕ್ಕಮಗಳೂರು: ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ, ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಡಿಹೆಚ್ಓ ಡಾ.ಪ್ರಭು ಅವರನ್ನು ಅಮಾನತುಗೊಳಿಸಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಆದೇಶವನ್ನು ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸರ್ಕಾರದ ಆದೇಶಾನುಸಾರ ಆಯ್ಕೆಯಾದ ಅಭ್ಯರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ನಿಯುಕ್ತಗೊಳಿಸದೆ ಆದೇಶವನ್ನು ಉಲ್ಲಂಘಿಸಿದ ಬಗ್ಗೆ ಸಾರ್ವಜನಿಕರ ದೂರು ಬಂದಿದ್ದು, ಡಿಹೆಚ್ಓ ರವರ ಕರ್ತವ್ಯ ಲೋಪ ದೃಢಪಟ್ಟ ಹಿನ್ನೆಲೆ ಅಮಾನತು ಆದೇಶ ಹೊರಡಿಸಲಾಗಿದೆ. ಪ್ರಭಾರವಾಗಿ ಡಾ.ಭರತ್ ರವರನ್ನು ತಕ್ಷಣ ಚಾರ್ಜ್ ತೆಗೆದುಕೊಳ್ಳಲು ಆದೇಶಿಸಿದೆ.

0 Comments:

Post a Comment

Subscribe to Post Comments [Atom]

<< Home