ಮನೆಮೇಲೆ ಉರುಳಿದ ಮರ ಸ್ಥಳಕ್ಕೆ ಬಾರದ ಜನಪ್ರತಿನಿಧಿಗಳು
ಚಿಕ್ಕಮಗಳೂರು : ಮಳೆ ಗಾಳಿಗೆ ರಭಸಕ್ಕೆ ನಿನ್ನೆ ಸುಮಾರು 5ಗಂಟೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತೋಟದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬಚ್ಚೀನಕುಡಿಗೆಯ ಸುರೇಶ್ ಗೌಡ ಎಂಬುವರ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಮನೆಯೊಳಗಿದ್ದ ಸುರೇಶ್ ಗೌಡ ಅವರು ಗಾಯಗೊಂಡಿದ್ದು ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದು ಸುರೇಶ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಪರಿಣಾಮ ಮನೆ ಕೂಡ ಜಖಂ ಗೊಂಡಿದೆ. ಘಟನಾ ಸ್ಥಳಕ್ಕೆ ಪಿಡಿಒ ಭೇಟಿ ಕೊಟ್ಟಿದ್ದಾರೆ. ಆದರೆ ಇಷ್ಟೆಲ್ಲ ಆದರೂ ಕೂಡ ಇದುವರೆಗೂ ಯಾವುದೇ ಜನಪ್ರತಿನಿಧಿಗಳು ಭೇಟಿ ನೀಡಿದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


0 Comments:
Post a Comment
Subscribe to Post Comments [Atom]
<< Home