ಬಿಜೆಪಿ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ.
ಮೂಡಿಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ತಾಲ್ಲೂಕು ಬಿಜೆಪಿ ಯುವಮೋರ್ಚಾ ವತಿಯಿಂದ ತಾಲ್ಲೂಕು ಪಂಚಾಯತಿಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಈ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನ ಭಾಗವಹಿಸಿ ರಕ್ತದಾನ ಮಾಡಿದರು.ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ರಘು ಜೆ ಎಸ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಕೆ ಸಿ ರತನ್, ಪ್ರಧಾನ ಕಾರ್ಯದರ್ಶಿಗಳಾದ ಗಜೇಂದ್ರ, ಪಂಚಾಕ್ಷರಿ, ಶಶಿಧರ್, ಉಪಾಧ್ಯಕ್ಷರಾದ ವಿನೋದ್ ಕಣಚೂರು, ಮುಖಂಡರಾದ ಜಯಂತ್ ಬಿದರಹಳ್ಳಿ, ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷರಾದ ಸಂಜಯ್ ಕೊಟ್ಟಿಗೆಹಾರ ಪ್ರಧಾನ ಕಾರ್ಯದರ್ಶಿಗಳಾದ ಬಾಲು ಶೆಟ್ಟಿ, ರಕ್ಷಿತ್ ಬಡವನದಿಣ್ಣೆ ಮತ್ತಿತರರು ಭಾಗವಹಿಸಿದ್ದರು.

0 Comments:
Post a Comment
Subscribe to Post Comments [Atom]
<< Home